ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಬಿಜೆಪಿ, ಬೆಂಗಳೂರು ಕೇಂದ್ರ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವು
,ಬೆಂಗಳೂರು: ಬಿಜೆಪಿ ಕೇಂದ್ರ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವು ವಸಂತನಗರದಲ್ಲಿರುವ ಜಸ್ಮ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ , ಬೆಂಗಳೂರು ಕೇಂದ್ರ ಸಂಸದರಾದ ಪಿ.ಸಿ.ಮೋಹನ್ , ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ(ಸುಬ್ಬಣ್ಣ) , ರಾಜ್ಯ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ್ , ಶಾಸಕರಾದ ಎಸ್.ಸುರೇಶ್ ಕುಮಾರ್ , ಎಸ್.ರಘು ಮುನಿರತ್ನ , ವಿಧಾನಪರಿಷತ್ ಸದಸ್ಯರು ಹಾಗೂ ಬೆಂಗಳೂರು ವಿಭಾಗ ಪ್ರಭಾರಿಗಳಾದ ಹೆಚ್.ಎಸ್.ಗೋಪಿನಾಥ್ , ವಿಧಾನಪರಿಷತ್ ಸದಸ್ಯರುಗಳಾದ ಮುನಿರಾಜು ಗೌಡ ಮತ್ತು ಅ.ದೇವೇಗೌಡ , ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಭಾಗವಹಿಸಿದ್ದರು.
ನೂತನ ಜಿಲ್ಲಾಧ್ಯಕ್ಷರಾದ ಶ ಸಪ್ತಗಿರಿಗೌಡ ರವರಿಗೆ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಜಿ.ಮಂಜುನಾಥ್ ರವರು ಜವಾಬ್ದಾರಿ ಹಸ್ತಾಂತರ ಮಾಡಿದರು