ಕರ್ನಾಟಕ ಪಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಬೆಂಗಳೂರಿನಲ್ಲಿ ‘ಆರ್ಟಿಕಲ್ 370’ ಸಿನಿಮಾ ವೀಕ್ಷಣೆ""
ಬೆಂಗಳೂರು: ನಗರದ ಒರಾಯನ್ ಮಾಲ್ನಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ ‘ಆರ್ಟಿಕಲ್ 370’ ಸಿನಿಮಾ ವೀಕ್ಷಣೆ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿ ವಿಶ್ವನಾಥ ಅಣಜಿ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ, ಯುವ ಮೋರ್ಚಾ ಮುಖಂಡ ಅನಿಲ್ ಶೆಟ್ಟಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ್ ಖಾಸಲೆ, ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ಸಿನಿಮಾ ನಿರ್ದೇಶಕ ಆದಿತ್ಯ ಸುಹಾಸ್ ಜಾಂಬಳೆ, ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾದ ವೆಂಕಟೇಶ್ ಮಾಲೆಪಾಟಿ, ಶರತ್ ಹೆಗ್ಡೆ, ನಾಗೇಶ್, ರತನ್ ಪೂಜಾರಿ, ಅವಿನಾಶ್, ಡಿ.ಟಿ.ವಿಜೇಂದ್ರ ಅವರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಚ.ನಾ.ಶಂಕರ್ ರಾವ್ ಅವರು ಬರೆದ ಶ್ಯಾಮಪ್ರಸಾದ್ ಮುಖರ್ಜಿ ಅವರ ಕುರಿತ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.