ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಎಂಎನ್ಟಿ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಢಾ ಅಂಬೇಡ್ಕರ್ ಜಯಂತಿ ಆಚರಣೆ""
ಬೆಂಗಳೂರು: ಕಮ್ಮಗೊಂಡನ ಹಳ್ಳಿಯಲ್ಲಿರುವ ಎಂಎನ್ಟಿ ಕಾಲೇಜಿನ ಆಡಳಿತ ಮಂಡಳಿಯು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಪುಷ್ಪ ಮಾಲೆಯನ್ನು ಹಾಕಿ ಆಚರಣೆ ಮಾಡಿದರು
ಈ ಸಂದರ್ಭದಲ್ಲಿ ಮಾಜಿ ಬಿಬಿಎಂಪಿ ಸದಸ್ಯರಾದ ಕೆ.ನಾಗಭೂಷಣ್ , ಭಾರತ ಕಂಡ ಅಪ್ರತಿಮ ದೇಶಪ್ರೇಮಿ, ಜಗತ್ತು ಕಂಡ ಮಹಾನ್ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 133 ನೇ ಜನ್ಮದಿನದ ಶುಭಾಶಯಗಳನ್ನು ಎಂ ಏನ್ ಟಿ ಐ ಕಾಲೇಜಿನ ಅಧ್ಯಕ್ಷರಾದ ಆರ್.ಶಾಂತ ಕುಮಾರ್ ಕೋರಿದರು ಹಾಗು ಆಡಳಿತ ಮಂಡಳಿಯ ಖಜಂಚಿಯಾದ ರಾಜೇಂದ್ರ ಆಡಳಿತ ಮಂಡಳಿಯ ನಿರ್ದೇಶಕರಾದ ಲಕ್ಷ್ಮೀಶ್ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಹರಿದಾಸ್ ರವರೊಡನೆ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು