ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆಯನ್ನು ಅಧ್ಯಕ್ಷರಾದ ಕೆ. ಸಿ. ವೆಂಕಟೇಶ್ ರವರ ಅಧ್ಯಕ್ಷತೆಯಲ್ಲಿ ಉಡುಪಿ ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು""
ಪೀಣ್ಯ ದಾಸರಹಳ್ಳಿ : ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಗ್ಯಾರಂಟೀ ಸಮಿತಿಯ ಸದಸ್ಯರುಗಳು ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನ್ಯಾಯಬೆಲೆ ಅಂಗಡಿಗಳ ಮಾಲೀಕರುಗಳು ಹಾಜರಿದ್ದು ಅನ್ನಭಾಗ್ಯ ಯೋಜನೆಯ ಜಾರಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು ನ್ಯಾಯಬೆಲೆ ಅಂಗಡಿ ಮಲೀಕರುಗಳು ಪಡಿತರ ವಿತರಣೆ ಬಗ್ಗೆ ಇರುವ ಸಮಸ್ಯೆಗಳನ್ನು ತಿಳಿಸಿದರು ತದನಂತರ ಅಧ್ಯಕ್ಷರಾದ ಕೆ.ಸಿ. ವೆಂಕಟೇಶ್ ರವರು ಗ್ಯಾರಂಟೀ ಯೋಜನೆಗಳ ರಾಜ್ಯಾಧ್ಯಕ್ಷರಾದ ಹೆ.ಎಂ.ರೇವಣ್ಣನವರ ಗಮನಕ್ಕೆ ತಂದು ಬಗೆಹರಿಸುವುದಾಗಿ ತಿಳಿಸಿದರು ಹಾಗೂ ಬಡವರಿಗೆ ವಿತರಿಸುವ ಪಡಿತರ ದಿನಸಿ ವಿತರಣೆಯ ಬಗ್ಗೆ ಯಾವುದೇ ಲೋಪ ದೋಷಗಳು ಆಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು